ಹರಿದಾಸ ಸಂಪದ
ಸಾರಿ ಬಂದನೆ ಪ್ರಾಣೇಶ ಬಂದನೆ
ರಾಗ ಹಿಂದೂಸ್ಥಾನಿ ಕಾಪಿ/ಅಟ್ಟ ತಾಳ
ಸಾರಿ ಬಂದನೆ ಪ್ರಾಣೇಶ ಬಂದನೆ || ಪಲ್ಲವಿ ||
ಸಾರಿ ಬಂದ ಲಂಕಾಪುರವ ಮೀರಿದ ರಾವಣನ ಕಂಡು
ಧೀರನು ವಯ್ಯಾರದಿಂದ || ಅನು ಪಲ್ಲವಿ ||
ವಾಯು ಪುತ್ರನೆ ಶ್ರೀರಾಮನ ದೂತನೆ ಪ್ರೀಯದಿಂದ
ಸೀತಾಂಗನೆಗೆ ಮುದ್ರಿಕೆಯ ತಂದಿತ್ತವನೆ || ೧ || ಮುಂದೆ ಓದಿ »
ನೋಡಿರಯ್ಯ ಹನುಮಂತನ ಮಹಿಮೆಯ
ರಾಗ ಶಂಕರಾಭರಣ/ಚಾಪು ತಾಳ
ನೋಡಿರಯ್ಯ ಹನುಮಂತನ ಮಹಿಮೆಯ
ಬೇಡಿರೋ ವರಗಳನು || ಪಲ್ಲವಿ ||
ರೂಢಿಯೊಳು ಇವನನ್ನು ಪಾಡಿ ಪೊಗಳುತಿಪ್ಪ ಜನರ
ನೋಡಿ ನೋಡಿ ವರವನೀವ ಗಾಡಿಕಾರ ಹನುಮನ್ನ || ಅನು ಪಲ್ಲವಿ ||
ಅಂದು ದಶರಥಸುತನಾಗಿ ಬಂದು ನಿಂದು ಸಾಕೇತದಿ ಮುಂದೆ ಓದಿ »
ಕಂದನ ಕಾಣಿರೇನೆ ಗೋಪಿಯ ಕಂದ
ರಾಗ ಸಾವೇರಿ/ಚಾಪು ತಾಳ
ಕಂದನ ಕಾಣಿರೇನೆ ಗೋಪಿಯ ಕಂದ || ಪಲ್ಲವಿ ||
ಕಂದನಲ್ಲವೆ ಎನ್ನ ಕುಂದಣದರಗಿಣಿಯೆ || ಅನು ಪಲ್ಲವಿ ||
ಉಂಗುರನಿಟ್ಟಿದ್ದೆ ಉಡಿದಾರ ಕಟ್ಟಿದ್ದೆ
ಬಂಗಾರದ ಟೊಪ್ಪಿಗೆ ತಲೆಯ ಮೇಲಿಟ್ಟ || ೧ ||
ರೊಟ್ಟಿಯ ಸುಟ್ಟಿದ್ದೆ ತುಪ್ಪವ ಕಾಸಿದ್ದೆ ಮುಂದೆ ಓದಿ »
ತೆರಳಿದರು ಹರಿಪುರಕಿಂದು
ತೆರಳಿದರು ಹರಿಪುರಕಿಂದು || ಪಲ್ಲವಿ ||
ಪುರಂದರದಾಸರಾಯರು ದೀನಬಂಧು || ಅನುಪಲ್ಲವಿ ||
ರಕ್ತಾಕ್ಷಿವತ್ಸರ ಪುಷ್ಯಾಂತ ರವಿವಾರ
ಮುಕ್ತಿಗೈದಿದರು ಕೇಳಿ ಬುಧಜನರು || ೧ ||
ವಿರೂಪಾಕ್ಷ ಕ್ಷೇತ್ರದಿ ವಿಠಲನ್ನ ಸನ್ನಿಧಿಯಲ್ಲಿ
ಶರೀರವನಿರಿಸಿ ಅನಾಥರನು ಹರಿಸಿ || ೨ || ಮುಂದೆ ಓದಿ »
ಗುರುವಿನ ಗುಲಾಮನಾಗುವ
ಪಲ್ಲವಿ:
ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ
ಪರಿಪರಿ ಶಾಸ್ತ್ರವನೋದಿದರೇನು ವ್ಯರ್ಥವಾಯಿತು ಭಕುತಿ
ಚರಣ:
1:
ಆರು ಶಾಸ್ತ್ರವ ಓದಿದರಿಲ್ಲ ನೂರಾರು ಪುರಾಣವ ಮುಗಿಸಿದರಿಲ್ಲ
ಸಾರ ನ್ಯಾಯ ಕಥೆಗಳ ಕೇಳ್ದರಿಲ್ಲ ಧೀರನಾಗಿ ತಾ ಪೇಳಿದರಿಲ್ಲ
2: ಮುಂದೆ ಓದಿ »
ರಂಗ ಬಂದ ಮನೆಗೆ
ಪಲ್ಲವಿ:
ರಂಗ ಬಂದ ಮನೆಗೆ ಶೃಂಗಾರ ನೋಡಿರೋ
ಹಿಂಗದಂಥ ಬಡತನ ಭಂಗವಾಗಿ ಹೋಯಿತೋ
ಚರಣಗಳು:
ಮಾನಾಭಿಮಾನವ ಬಿಟ್ಟು ನಾನಾರಣ್ಯ ತಿರುಗಿದರೆ
ಗೇಣು ಅರಿವೆ ಉಟ್ಟೇನೆನಲು ಹುಟ್ಟು ದೊರೆಯದು
ದಾನವಾಂತಕ ರಂಗ ಬರಲು ನಾನಾ ಪರಿಯ ಪಟ್ಟವಾಳಿ
ತಾನೇ ಬಂದು ಮನೆಯೊಳು ನಿದಾನವಾಯಿತೋ ಮುಂದೆ ಓದಿ »
ರಂಗ ಕೊಳಲಲೂದಲಾಗಿ
ರಂಗ ಕೊಳಲನೂದಲಾಗಿ. ರಾಗ: ಆರಭಿ. ಏಕ ತಾಳ.
ಪಲ್ಲವಿ:
ರಂಗ ಕೊಳಲನೂದಲಾಗಿ ಮಂಗಳಮಯವಾಯಿತು ಧರೆ
ಜಗಂಗಳು ಚೈತನ್ಯ ಮರೆದು ಅಂಗ ಪರವಶವಾದುವು
ಚರಣ
1:
ತೀಡಿದ ಮಾರುತ ಮಂದಗತಿಗೈದ ಪಾಡಿದ ಅಲರು ಬಲ ಗೊಂಚಲು ಬಿಡೆ
ಪಾಡಲೊಲ್ಲವಳಿ ಕುಲಗಳು ಪಾಡಿದ ಮಾಮರ ಚಿಗುರೊಡೆಯದು ಮುಂದೆ ಓದಿ »
ಅಂಗನೆಯರೆಲ್ಲ ನೆರೆದು
ಪಲ್ಲವಿ:
ಅಂಗನೆಯರೆಲ್ಲ ನೆರೆದು ಚಪ್ಪಾಳಿಕ್ಕುತ ದಿವ್ಯ
ಮಂಗಳ ನಾಮವ ಪಾಡಿ ರಂಗನ ಕುಣಿಸುವರು
ಚರಣ
1:
ಪಾಡಿ ಮಲ್ಹಾರಿ ಭೈರವಿ ಸಾರಂಗ ದೇಶಿ ಗುಂಡಕ್ರಿಯ ಗುರ್ಜರಿ ಕಲ್ಯಾಣಿ ರಾಗದಿ ತಂಡ
ತಂಡದಲಿ ನೆರೆದು ರಂಗನ ಉಡಿಯ ಘಂಟೆ ಘಣ್ ಘಣ್ ಘಣ್ ಘಣಿರೆಂದು ಹಿಡಿದು ಕುಣಿಸುವರು
2: ಮುಂದೆ ಓದಿ »
ಪುರಂದರ ದಾಸರು ಮತ್ತು ಬತ್ತೀಸ ರಾಗಗಳು
ಪುರಂದರ ದಾಸರ ರಚನೆಗಳಲ್ಲಿ ಅವರ ಕಾಲದ ಸಂಗೀತದ ಬಗ್ಗೆ ಹಲವು ಹೊಳಹುಗಳು ನಮಗೆ ದೊರೆಯುತ್ತವೆ. ಅವರ ಕಾಲದ ರಾಗ ತಾಳಗಳು, ವಾದ್ಯಗಳು ಹಾಡುವ ಬಗೆ ಈ ಮೊದಲಾದುವುಗಳನ್ನು ಅವರ ರಚನೆಗಳೊಳಗಿರುವ ಅಂತರಿಕ ಆಧಾರಗಳಿಂದ ನಾವು ಪಡೆಯಬಹುದು.
ಮೊದಲಿಗೆ ಈ ಹಾಡನ್ನು ನೋಡೋಣ: ಮುಂದೆ ಓದಿ »
ಕರುಣಿಸೋ ರಂಗಾ
ರಚನೆ - ಪುರಂದರದಾಸರು
ಕರುಣಿಸೋ ರಂಗಾ ಕರುಣಿಸೋ
ಹಗಲು ಇರುಳು ನಿನ್ನ ಸ್ಮರಣೆ ಮರೆಯದಂತೆ ||ಪಲ್ಲವಿ||
ರುಕುಮಾಂಗದನಂತೆ ವ್ರತವ ನಾನರಿಯೆನೊ
ಶುಕ ಮುನಿಯಂತೆ ಸ್ತುತಿಸಲು ಅರಿಯೆ
ಬಕವೈರಿ*ಯಂತೆ ಧ್ಯಾನವ ಮಾಡಲರಿಯೆ
ದೇವಕಿಯಂತೆ ಮುದ್ದಿಸಲರಿಯೆನೊ ||೧|| ಮುಂದೆ ಓದಿ »
ಹರಿಯೇ ಗತಿ ಸಿರಿ ವಿರಿಂಚಿ ಶಿವರಿಗೆ
ಹರಿಯೇ ಗತಿ ಸಿರಿ ವಿರಿಂಚಿ ಶಿವರಿಗೆ ಹರಿಯೆ ಗತಿ ಸುರಪಸುರಾದಿಗಳಿಗೆ
ಚರಣ
1:
ರುಕ್ಮಿಣೀ ದೇವಿಯ ಶಿಶುಪಾಲಗೀವೆನೆಂದು ರುಕ್ಮ ಸಂಭ್ರಮಿಸಲು ಕೃಷ್ಣ ಬಂದು
ಸಕಲ ರಾಯರುಗಳು ಸನ್ನದ್ಧರಾಗಿರೆ ರುಕುಮಿಣೀಯನು ತಂದು ವರಿಸಿ ಅಳಿದನಾಗಿ
2: ಮುಂದೆ ಓದಿ »
ಅಂಬೆಗಾಲಿಕ್ಕುತಲಿ ಬಂದ ಗೋವಿಂದ
ಪಲ್ಲವಿ:
ಅಂಬೆಗಾಲಿಕ್ಕುತಲಿ ಬಂದ ಗೋವಿಂದ ಅನುಪಲ್ಲವಿ :
ಅಂಬುಜನಾಭ ದಯದಿಂದ ಎನ್ನ ಮನೆಗೆ
ಚರಣಗಳು:
ಜಲಚರ ಜಲವಾಸ ಧರಣಿಧರ ಮೃಗರೂಪ ನೆಲನಳೆದು ಮೂರಡಿ ಮಾಡಿಬಂದ
ಕುಲನಾಶ ವನವಾಸ ನವನೀತಚೋರನಿವ ಲಲನೆಯರ ವ್ರತಭಂಗ ವಾಹನ ತುರಂಗ || 1|| ಮುಂದೆ ಓದಿ »
ಎಂಥವನೆಂಥವನೆ ರಂಗಯ್ಯ
ಪಲ್ಲವಿ:
ಎಂಥವನೆಂಥವನೆ ರಂಗಯ್ಯ ಎಂಥವನೆಂಥವನೆ
ಚರಣ:
೧:
ಆಗಮವನು ತಂದವನೆ ರಂಗ
ಬೇಗದಿ ಗಿರಿಯ ಪೊತ್ತವನೆ
ಮೂಗಿಂದ ಭೂಮಿಯನೆತ್ತಿದನೆ ಶಿಶು
ಕೂಗಲು ಕಂಭದಿಂದೊದಗಿದನೆ ಕೃಷ್ಣ
೨:
ಧರಣಿಯ ಈರಡಿ ಮಾಡಿದನೆ ಭೂ-
ಸುರನಾಗಿ ಪರಶುವ ಧರಿಸಿದನೆ
ಭರದಿ ಕೋಡಗ ಹಿಂಡ ಕೂಡಿದನೆ ಫಣಿ- ಮುಂದೆ ಓದಿ »
ಮಂಗಳಂ ಜಯ ಮಂಗಳಂ
ಮಂಗಳಂ ಜಯ ಮಂಗಳಂ ಜಯ ಮಂಗಳಂ ಜಯ ಮಂಗಳಂ ||ಪಲ್ಲವಿ||
ಚರಿಸುವ ಜಲದಲ್ಲಿ ಮತ್ಸ್ಯಾವತಾರಗೆ
ಧರೆಯ ಬೆನ್ನಲಿ ಪೊತ್ತ ಕೂರ್ಮನಿಗೆ
ಧರೆಯನುದ್ಧರಿಸಿದ ವರಾಹಾವತಾರಗೆ
ತರಳನ್ನ ಕಾಯ್ದಂಥ ನರಸಿಂಹಗೆ ||೧||
ಭೂಮಿಯ ದಾನವ ಬೇಡಿದವಗೆ
ಆ ಮಹಾಕ್ಷತ್ರಿಯರ ಗೆಲಿದವಗೆ ಮುಂದೆ ಓದಿ »
ಇವಗೇಕೆ ಪರಿಮಳ ?
ಪಲ್ಲವಿ:
ಇವಗೇಕೆ ಪರಿಮಳ ಇವಗೇಕೆ ಶೃಂಗಾರ ?
ಅನುಪಲ್ಲವಿ:
ನವನೀತ ಚೋರ ನಾರುವ ಗೊಲ್ಲಗೆ ?
ಚರಣ:
ಹೊಲಸು ಮೈಯವಗೇಕೆ ಹೊಸ ಕಸ್ತೂರಿಯ ವಾಟ?
ತಲೆದೋರುವವಗೇಕೆ ದಟ್ಟ ಪುನುಗು ?
ಬಲು ಕೇಶದವಗೇಕೆ ಬಾವನ್ನದಾ ಲೇಪ ?
ಸಲೆಕುರೂಪಿನವಗೇಕೆ ಮಂಡೆಸಾದು* ? ಮುಂದೆ ಓದಿ »
ಇವಗೇಕೆ ಶೃಂಗಾರ?
ಪಲ್ಲವಿ:
ಇವಗೇಕೆ ಶೃಂಗಾರ? ಇವಗೇಕೆ ಬಂಗಾರ?
ಅನುಪಲ್ಲವಿ:
ಕಾಡ ಕರಡಿಯಂತೆ ಪೋಲುವ ದೇಹಕ್ಕೆ
ಚರಣಗಳು:
ನೀರೊಳಗೆ ಮುಳುಗಿದವಗೆ ಪರಿಮಳ ಗಂಧವೇಕೆ ಭಾರ ಪೊತ್ತವಗೆ ಪನ್ನೀರು ಏಕೆ?
ಕೋರೆ ದಾಡೆಯ ಘೋರ ಮುಖಗೇಕೆ ಕನ್ನಡಿ ಕರುಳ ಹಾರ ಧರಿಸಿದವಕೆ ಹಾರ ಪದಕವೇಕೆ? ಮುಂದೆ ಓದಿ »
ಪಂಕಜ ಮುಖಿಯರೆಲ್ಲರು ಬಂದು
ಪಲ್ಲವಿ:
ಪಂಕಜ ಮುಖಿಯರೆಲ್ಲರು ಬಂದು ಲಕ್ಷ್ಮೀ ವೇಂಕಟರಮಣಗಾರತಿ ಎತ್ತಿರೆ
ಚರಣ:
1:
ಮತ್ಸ್ಯಾವತಾರಗೆ ಮಂದರೋದ್ಧಾರಗೆ ಅಚ್ಚರಿಯಿಂದ ಭೂಮಿ ತಂದವಗೆ
ಹೆಚ್ಚಾದ ಉಕ್ಕಿನ ಕಂಭದಿಂದಲಿ ಬಂದ ಲಕ್ಶ್ಮೀ ನರಸಿಂಹಗಾರತಿ ಎತ್ತಿರೆ
2: ಮುಂದೆ ಓದಿ »
ಮಕುಟಕ್ಕೆ ಮಂಗಳ
ಮಕುಟಕ್ಕೆ ಮಂಗಳ ಮಚ್ಚಾವತಾರಗೆ
ಮುಖಕ್ಕೆ ಮಂಗಳ ಮುದ್ದು ಕೂರ್ಮನಿಗೆ
ಸುಕಂಠಕ್ಕೆ ಮಂಗಳ ಸೂಕರ ರೂಪಗೆ
ನಖಕ್ಕೆ ಮಂಗಳ ನರಸಿಂಗಗೆ
ವಕ್ಷಕ್ಕೆ ಮಂಗಳ ವಟು ವಾಮನನಿಗೆ
ಪಕ್ಷಕ್ಕೆ ಮಂಗಳ ಭಾರ್ಗವಗೆ
ಕಕ್ಷಕ್ಕೆ ಮಂಗಳ ಕಾಕುತ್ಸ ರಾಮಗೆ
ಕುಕ್ಷಿಗೆ ಮಂಗಳ ಕೃಷ್ಣರಾಯಗೆ ಮುಂದೆ ಓದಿ »
ತರಳೆ ರನ್ನೆ ಕಪ್ಪು ಮೈಯವ ಯಾತರ ಚಲುವನೇ ?
ತರಳೆ ರನ್ನೆ ಕಪ್ಪು ಮೈಯವ ಯಾತರ ಚಲುವನೇ ?
ಕರಿಯ ಜಟೆಯ ಜೋಗಿಗಿಂತ ಉತ್ತಮನಲ್ಲವೇನೆ ?
ಜಲಧಿಯೊಳು ವಾಸವೇನೆ ಮನೆಗಳು ಇಲ್ಲವೆ ?
ಲಲನೆ ಕೇಳು ಕಾಡಿಗಿಂತ ಲೇಸು ಅಲ್ಲವೇ ?
ಮಂದರ ಗಿರಿಯ ಪೊತ್ತಿಹುದು ಏನು ಚಂದವೇ ?
ಕಂದನ ಒಯ್ದು ಅಡವಿಯಲ್ಲಿಡುವುದು ಯಾವ ನ್ಯಾಯವೇ ? ಮುಂದೆ ಓದಿ »
ಕಾಳಿಯ ಮರ್ದನ ರಂಗಗೆ ಹೇಳೆ
ಪಲ್ಲವಿ:
ಕಾಳಿಯ ಮರ್ದನ ರಂಗಗೆ ಹೇಳೆ ಗೋಪಮ್ಮ ಬುದ್ಧಿ
ಕೇಳಲೊಲ್ಲನು ಎನ್ನ ಮಾತನು
ಚರಣ:
ದಿಟ್ಟ ನೀರೊಳು ಕಣ್ಣ ಮುಚ್ಚನೆ ಹೋಗಿ ಬೆಟ್ಟಕೆ ಬೆನ್ನಾತು ನಿಂತನೆ
ಸಿಟ್ಟಲಿ ಕೋರೆದಾಡೆ ತಿವಿದನೆ ಅಹ ಗಟ್ಟಿ ಉಕ್ಕನು ಒಡೆದು ಬಂದನೆ ಮುಂದೆ ಓದಿ »
